For the best experience, open
https://m.hosakannada.com
on your mobile browser.
Advertisement

Arvind Kejriwal: ಬಂಧನದ ನಂತರ 4.5 ಕೆಜಿ ತೂಕ ಕಳೆದುಕೊಂಡ ಕೇಜ್ರಿವಾಲ್ : ಅಸಲಿಗೆ ಕೇಜ್ರಿವಾಲ್ ಅವರಿಗೆ ಏನಾಗಿದೆ?

Arvind Kejriwal: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾರ್ಚ್ 21 ರಂದು ಬಂಧನಕ್ಕೊಳಗಾದಾಗಿನಿಂದ ವೇಗವಾಗಿ ತೂಕವನ್ನು ಕಳೆದುಕೊಳ್ಳುತ್ತಿದ್ದಾರೆ
11:18 AM Apr 03, 2024 IST | ಸುದರ್ಶನ್
UpdateAt: 11:24 AM Apr 03, 2024 IST
arvind kejriwal  ಬಂಧನದ ನಂತರ 4 5 ಕೆಜಿ ತೂಕ ಕಳೆದುಕೊಂಡ ಕೇಜ್ರಿವಾಲ್    ಅಸಲಿಗೆ  ಕೇಜ್ರಿವಾಲ್ ಅವರಿಗೆ ಏನಾಗಿದೆ

Arvind Kejriwal: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾರ್ಚ್ 21 ರಂದು ಬಂಧನಕ್ಕೊಳಗಾದಾಗಿನಿಂದ ವೇಗವಾಗಿ ತೂಕವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಎಎಪಿ ಹಿರಿಯ ನಾಯಕ ಅತಿಶಿ ಬುಧವಾರ ತಿಳಿಸಿದ್ದಾರೆ ಮತ್ತು ಅವರನ್ನು ಜೈಲಿನಲ್ಲಿ ಇರಿಸುವ ಮೂಲಕ ಬಿಜೆಪಿ ಅವರ ಆರೋಗ್ಯವನ್ನು ಅಪಾಯಕ್ಕೆ ಸಿಲುಕಿಸಿದೆ ಎಂದು ಆರೋಪಿಸಿದ್ದಾರೆ.

Advertisement

ಇದನ್ನೂ ಓದಿ: Reserve Bank Of India: RBI ಹಣದ ವ್ಯವಹಾರದ ಜೊತೆಗೆ ಈ ಕೆಲಸದಲ್ಲಿ ಕೂಡಾ ಪ್ರಮುಖ ಪಾತ್ರ ವಹಿಸುತ್ತದೆ; ಯಾವುದೆಲ್ಲ?

ಆದಾಗ್ಯೂ, ಏಪ್ರಿಲ್ 15 ರವರೆಗೆ ಕೇಜ್ರಿವಾಲ್ ಇರುವ ತಿಹಾ‌ರ್ ಜೈಲಿನ ಆಡಳಿತವು ಮಾನವ ಹಕ್ಕುಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ತಿಹಾರ್ ಜೈಲಿನ ಹಿರಿಯ ಅಧಿಕಾರಿಯೊಬ್ಬರು ಇದಕ್ಕೆ ಪ್ರತಿಕ್ರಿಯಿಸಿದ್ದು ಕೇಜ್ರಿವಾಲ್ ಅವರ ಆರೋಗ್ಯದಲ್ಲಿ ಯಾವುದೇ ಏರುಪೇರಾಗಿಲ್ಲ ಎಂದು ಹೇಳಿದ್ದಾರೆ.

Advertisement

ಇದನ್ನೂ ಓದಿ: Summer Care: ಮಹಿಳೆಯರೇ, ಬೇಸಿಗೆಯಲ್ಲಿ ಒಳ ಉಡುಪುಗಳ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಿ; ಕಾರಣ ಇಲ್ಲಿದೆ

ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಟ್ರಿವಾಲ್‌ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಅವರನ್ನು ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

"ಅರವಿಂದ್ ಕೇಜ್ರವಾಲ್ ಜಿ ತೀವ್ರ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದಾರೆ. ಆರೋಗ್ಯ ಸಮಸ್ಯೆಗಳ ನಡುವೆಯೂ ಅವರು ದಿನದ 24 ಗಂಟೆಗಳ ಕಾಲ ದೇಶ ಸೇವೆಯಲ್ಲಿ ತೊಡಗಿದ್ದರು. ಅವರ ಬಂಧನದಿಂದ ಕೇಜ್ರಿವಾಲ್ ಅವರ ತೂಕ 4.5 ಕೆಜಿಯಷ್ಟು ಕಡಿಮೆಯಾಗಿದೆ. ಇದು ತುಂಬಾ ಆತಂಕಕಾರಿಯಾಗಿದೆ. ಬಿಜೆಪಿ ಅವರ ಆರೋಗ್ಯವನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ.'' ಎಂದು ಅವರು ಹಿಂದಿಯಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರಿಗೆ ಏನಾದರೂ ಆದರೆ, ಇಡೀ ದೇಶವಲ್ಲ, ದೇವರು ಕೂಡ ಅವರನ್ನು ಕ್ಷಮಿಸುವುದಿಲ್ಲ ಎಂದು ಅವರು ಹೇಳಿದರು.

ದೆಹಲಿ ಮುಖ್ಯಮಂತ್ರಿಗೆ ತಿಹಾ‌ರ್ ಜೈಲಿನಲ್ಲಿ ಮನೆಯಿಂದ ಊಟ ತರಿಸಿ ಮಾಡಲು ಅವಕಾಶ ನೀಡಲಾಗಿದೆ. ಮಂಗಳವಾರ ಬೆಳಗ್ಗೆ ಕೇಜ್ರಿವಾಲ್ ಅವರ ಸಕ್ಕರೆ ಪ್ರಮಾಣ ಕಡಿಮೆಯಾಗಿತ್ತು. ಅವರ ಶುಗ‌ರ್ ಲೆವೆಲ್ ಏರುಪೇರಾಗುತ್ತಿದ್ದರಿಂದ ತಿಹಾರ್ ಜೈಲು ವೈದ್ಯರ ಮೇಲ್ವಿಚಾರಣೆಯಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement