For the best experience, open
https://m.hosakannada.com
on your mobile browser.
Advertisement

CM Siddaramaiah: ಖಾಸಗಿ ಕಂಪೆನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ - ಹಳೆ ಪೋಸ್ಟ್ ಡಿಲೀಟ್ ಮಾಡಿ, ಹೊಸ ಪೋಸ್ಟ್ ಹಾಕಿದ ಸಿದ್ದರಾಮಯ್ಯ!!

CM Siddaramaiah: ಸಿದ್ದರಾಮಯ್ಯ ಮಾಡಿದ್ದ ಟ್ವೀಟ್ ನಿಂದ ಎಲ್ಲರೂ ಸಂತಸಪಟ್ಟಿದ್ದರು . ಆದರೆ ಈ ಸಂತೋಷವನ್ನು ಇದೆ ಸಿದ್ದರಾಮಯ್ಯ ಸರ್ಕಾರ ಕಿತ್ತುಕೊಂಡಿದೆ.
09:33 AM Jul 18, 2024 IST | ಸುದರ್ಶನ್
UpdateAt: 09:33 AM Jul 18, 2024 IST
cm siddaramaiah  ಖಾಸಗಿ ಕಂಪೆನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ   ಹಳೆ ಪೋಸ್ಟ್ ಡಿಲೀಟ್ ಮಾಡಿ  ಹೊಸ ಪೋಸ್ಟ್ ಹಾಕಿದ ಸಿದ್ದರಾಮಯ್ಯ
Advertisement

CM Siddaramaiah: ಎಲ್ಲಾ ರೀತಿಯ ಉದ್ಯೋಗ, ಕಂಪೆನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡಿ, ಮೊದಲು ಕನ್ನಡಿಗರಿಗೆ ಆದ್ಯತೆ ನೀಡಿ ಎಂಬುದು ಹೋರಾಟಗಾರರ, ಕರುನಾಡಿಗರ ಕೂಗು. ಇದುವರೆಗಿನ ಸರ್ಕಾರಗಳು ಭರವಸೆಯನ್ನಷ್ಟೇ ನೀಡಿದವು. ಆದರೀಗ ಇದರ ಪರಿಣಾಮ ಅರಿತ ಸಿದ್ದರಾಮಯ್ಯ ಸರ್ಕಾರ ಖಾಸಗಿ ಕಂಪೆನಿಗಳಲ್ಲೂ ಕನ್ನಡಿಗರಿಗೆ ಕಡ್ಡಾಯ ಮೀಸಲಾತಿ(Reservation For Private Sector) ಕೊಡಿಸಲು ಮುಂದಾಗಿದೆ ಎಂದು ಕೆಲ ದಿನಗಳ ಹಿಂದೆ ಸಿದ್ದರಾಮಯ್ಯ ಮಾಡಿದ್ದ ಟ್ವೀಟ್ ನಿಂದ ಎಲ್ಲರೂ ಸಂತಸಪಟ್ಟಿದ್ದರು . ಆದರೆ ಈ ಸಂತೋಷವನ್ನು ಇದೆ ಸಿದ್ದರಾಮಯ್ಯ ಸರ್ಕಾರ ಕಿತ್ತುಕೊಂಡಿದೆ.

Advertisement

ಹೌದು, ರಾಜ್ಯದಲ್ಲಿನ ಎಲ್ಲಾ ಕೈಗಾರಿಕೆಗಳಲ್ಲೂ ಸಿ ಮತ್ತು ಡಿ ವರ್ಗದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಮೀಸಲಾತಿ ಕಲ್ಪಿಸುವುದು, ಖಾಸಗಿ ಕಂಪೆನಿಗಳಲ್ಲಿ ಕನ್ನಡಿಗರಿಗೆ ಕಡ್ಡಾಯ ನೇಮಕಾತಿ ಸೇರಿದಂತೆ ಏಳು ವಿಧೇಯಕಗಳನ್ನು ಮಂಡಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಆದರೆ ಇದೀಗ ಇದ್ದಕ್ಕಿದ್ದಂತೆ ಸಿಎಂ ಸಿದ್ದರಾಮಯ್ಯ(CM Siddaramaiah) ತಮ್ಮ ಪೋಸ್ಟ್ ಅನ್ನು ಡಿಲೀಟ್‌ ಮಾಡಿದ್ದಾರೆ. ಈ ಬೆನ್ನಲ್ಲೇ ಅವರು ದುಡ್ಡಿರುವವರ, ಕೈಗಾರಿಕೋದ್ಯಮಿಗಳ ಆಮೀಷಕ್ಕೋ, ಬೆದರಿಕೆಗೋ ಬೆದರಿ ಹೊಸ ಪೋಸ್ಟ್ ಹಾಕಿದ್ದಾರೆ.

ಹೊಸ ಪೋಸ್ಟ್ ನಲ್ಲಿ ಏನಿದೆ?
ಹಳೇ ಪೋಸ್ಟ್ ಡಿಲೀಟ್ ಮಾಡಿ ಹೊಸ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ ಅವರು 'ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ' ಎಂದು ಬರೆದುಕೊಂಡಿದ್ದಾರೆ.

Advertisement

ಹಳೇ ಎಕ್ಸ್ ಪೋಸ್ಟ್ ನಲ್ಲೇನಿತ್ತು ? :
ರಾಜ್ಯದ ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಿಗೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಸಿಎಂ ಎಕ್ಸ್ ಪೋಸ್ಟ್ ಮಾಡಿದ್ದರು.

ಇನ್ನು ಈ ಬಗ್ಗೆ ಸದನದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು “ಕರ್ನಾಟಕದಲ್ಲಿ ಕನ್ನಡಿಗರ ಸ್ವಾಭಿಮಾನವನ್ನು ಎತ್ತಿ ಹಿಡಿಯಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಖಾಸಗಿ ಮಳಿಗೆಗಳಲ್ಲಿ ಕನ್ನಡ ನಾಮಫಲಕ ವಿಚಾರ ಹಾಗೂ ನಮ್ಮ ಧ್ವಜ, ಭಾಷೆ, ಸಂಸ್ಕೃತಿ, ಕಡತಗಳಲ್ಲಿ ಕನ್ನಡ ಬಳಕೆ ಸೇರಿದಂತೆ ರಾಜ್ಯದಲ್ಲಿ ಮುಂದೆ ಸೃಷ್ಟಿಯಾಗುವ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಇಂತಿಷ್ಟು ಉದ್ಯೋಗ ಮೀಸಲಿಡುವವರೆಗೂ ನಮ್ಮ ಸರ್ಕಾರ ಕೆಲಸ ಮಾಡುತ್ತದೆ. ಈ ನಿಟ್ಟಿನಲ್ಲಿ ಈ ಮಸೂದೆ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಅಲ್ಲದೆ ಕಿರಣ್ ಮಜುಂದಾರ್ ಹಾಗೂ ಮೋಹನ್ ದಾಸ್ ಪೈ ಅವರಂತಹ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ತಂತ್ರಜ್ಞಾನ ಆಧರಿತ ಉದ್ಯೋಗಗಳ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಈ ವಿಚಾರ ನಮಗೆ ಅರ್ಥವಾಗುತ್ತದೆ. ಇಂತಹ ವಿಚಾರದಲ್ಲಿ ನಾವು ವಿನಾಯಿತಿ ನೀಡುತ್ತೇವೆ. ಈ ಬಗ್ಗೆ ಅವರು ಸರ್ಕಾರದ ಗಮನಕ್ಕೆ ತರಬೇಕು. ಸದನ ನಡೆಯುತ್ತಿರುವ ಸಮಯದಲ್ಲಿ ಮಸೂದೆಯ ಇತರ ಮಾಹಿತಿಯನ್ನು ನಾನು ಸದನದ ಹೊರಗೆ ಬಹಿರಂಗಪಡಿಸಲು ಆಗುವುದಿಲ್ಲ. ಸದನದಲ್ಲಿ ಎಲ್ಲ ಅಂಶಗಳು ಚರ್ಚೆಯಾಗಲಿ'' ಎಂದರು.

Actor Darshan: ಇಂದು ದರ್ಶನ್‌ ಆಂಡ್‌ ಗ್ಯಾಂಗ್‌ ಜಡ್ಜ್‌ ಮುಂದೆ ಹಾಜರು; ರಿಟ್‌ ಅರ್ಜಿ ವಿಚಾರಣೆ, ಮತ್ತೆ ಜೈಲೂಟವೇ ಫಿಕ್ಸ್‌?

Advertisement
Advertisement
Advertisement