ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Congress Government : ಸಿದ್ದರಾಮಯ್ಯ ಸರ್ಕಾರದ 10 ಎಡವಟ್ಟುಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ !!

Congress Government: ಆರ್‌ ಅಶೋಕ್‌(R Ashok) ಸಿದ್ದರಾಮಯ್ಯನವರ ಸರ್ಕಾರದ 10 ಎಡವಟ್ಟುಗಳು ಎಂದು ಪಟ್ಟಿಯನ್ನು ರಿಲೀಸ್ ಮಾಡಿದ್ದಾರೆ.
10:45 AM May 10, 2024 IST | ಸುದರ್ಶನ್
UpdateAt: 10:47 AM May 10, 2024 IST

Congress Government : ರಾಜ್ಯದಲ್ಲಿ ಸಿದ್ದರಾಮಯ್ಯ(CM Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರವು (Congress government)ಅಧಿಕಾರಕ್ಕೆ ಬಂದು ಕೆಲವೇ ದಿನಗಳಲ್ಲಿ ಸುಮಾರು ಒಂದು ವರ್ಷ ಆಗುತ್ತಿದೆ. ಈ ನಡುವೆ ಲೋಕಸಭಾ ಚುನಾವಣೆ ಕೂಡ ರಾಜ್ಯದಲ್ಲಿ ಮುಕ್ತಾಯವಾಗಿದೆ. ಆದರೂ ರಾಜಕೀಯ ಕೆಸರೆರಚಾಟಗಳು ನಡೆಯುತ್ತಿವೆ. ಅಂತೆಯೇ ಕೆಲ ದಿನಗಳ ಹಿಂದೆ ಸಿದ್ದರಾಮಯ್ಯ ಅವರು ನಮ್ಮ ಪ್ರಧಾನಮಂತ್ರಿ ಮೋದಿ ಅವರು ಲೋಕಸಭಾ ಚುನಾವಣಾ(Parliament Election) ಪ್ರಚಾರ ಕಾಲದಲ್ಲಿ ಹೇಳುತ್ತಿರುವ ಸುಳ್ಳುಗಳು ಎಂದು 15 ವಿಚಾರಗಳನ್ನ ಪ್ರಸ್ತಾಪಿ ಟ್ವೀಟ್‌ ಮಾಡಿದ್ದಾರೆ. ಈ ವಿಚಾರವಾಗಿ ಆರ್‌ ಅಶೋಕ್‌(R Ashok) ಸಿದ್ದರಾಮಯ್ಯನವರ ಸರ್ಕಾರದ 10 ಎಡವಟ್ಟುಗಳು ಎಂದು ಪಟ್ಟಿಯನ್ನು ರಿಲೀಸ್ ಮಾಡಿದ್ದಾರೆ.

Advertisement

https://x.com/RAshokaBJP/status/1788230554791387233?t=_-_ciB8MkNWJEmvK2kBKfg&s=08

ಹೌದು, ರಾಜ್ಯದಲ್ಲಿ ವಿರೋಧ ಪಕ್ಷದ ಸ್ಥಾನದಲ್ಲಿರುವ ಬಿಜೆಪಿಯು ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಲೇ ಬರುತ್ತಿದೆ. ಸಣ್ಣ ವಿಚಾರ ಸಿಕ್ಕರೂ ಅದನ್ನು ರಾಜಕೀಯವಾಗಿ ಬಳಸಿ ಸರ್ಕಾರದ ಆಡಳಿತವನ್ನು ಟೀಕಿಸುತ್ತಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರ ಪ್ರಧಾನಿಯನ್ನು ಟೀಕಿಸಿತು ಎಂದು ಅವರು ಕೂಡ ಸಿದ್ದರಾಮಯ್ಯ ಸರ್ಕಾರದ ಎಡವಟ್ಟುಗಳು ಎಂದು ಪಟ್ಟಿಯನ್ನು ಹಂಚಿಕೊಂಡಿದ್ದಾರೆ. ಏನೇನಿದೆ ಅದರಲ್ಲಿ?

Advertisement

ಇದನ್ನೂ ಓದಿ: Neeraj Chopra: ಮೂರು ವರ್ಷಗಳ ಬಳಿಕ ಮತ್ತೆ ಕಣಕ್ಕಿಳಿದ ಭಾರತದ ಗೋಲ್ಡನ್ ಬಾಯ್ ನೀರಜ್ ಚೋಪ್ರಾ : ನ್ಯಾಷನಲ್ ಫೆಡರೇಷನ್ ಕಪ್'ನಲ್ಲಿ ಮಿಂಚಲಿರುವ ನೀರಜ್ ಚೋಪ್ರಾ

ಸಿದ್ದರಾಮಯ್ಯನವರ ಸರ್ಕಾರದ ಎಡವಟ್ಟುಗಳು...

1. ಕೇಂದ್ರ ಸರ್ಕಾರ ರೈತರಿಗೆ ಬರ ಪರಿಹಾರ ನೀಡಲು 3,454 ಕೋಟಿ ರೂಪಾಯಿ ಬಿಡುಗಡೆ ಮಾಡಿ 2 ವಾರ ಕಳೆದರೂ ಒಂದು ನಯಾ ಪೈಸೆ ಬರ ಪರಿಹಾರ ಇನ್ನೂ ರೈತರ ಕೈಸೇರಿಲ್ಲ.

2. ಹೈನುಗಾರರಿಗೆ 7 ತಿಂಗಳಿಂದ ಬಾಕಿ ಇರುವ 700 ಕೋಟಿ ರೂಪಾಯಿ ಇನ್ನೂ ಪಾವತಿ ಆಗಿಲ್ಲ.

3. ತೆಂಗು ಬೆಳೆಗಾರರ ನಷ್ಟದ ಬಗ್ಗೆ ಅಧ್ಯಯನ ನಡೆಸಲು ಇನ್ನೂ ಸಮಿತಿ ರಚಿಸಿಲ್ಲ.

4. ಹೆಣ್ಣು ಭ್ರೂಣ ಪತ್ತೆ ಹತ್ಯೆ ಪ್ರಕರಣದ ಜಾಲ ದಿನೇ ದಿನೇ ಹೆಚ್ಚಾಗುತ್ತಿದ್ದರೂ ಇನ್ನೂ SIT ರಚನೆ ಆಗಿಲ್ಲ.

5. ಅಂಗನವಾಡಿಗಳಲ್ಲಿ ಊಟ ಆರೈಕೆ ಸರಿ ಇಲ್ಲದೆ 2 ಲಕ್ಷಕ್ಕೂ ಹೆಚ್ಚು ಮಕ್ಕಳ ದಾಖಲಾತಿ ಕಡಿಮೆ ಆಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ.

6. ಆಂಬ್ಯುಲೆನ್ಸ್ ಚಾಲಕರಿಗೆ ಮೂರು ತಿಂಗಳಿಂದ ವೇತನ ಪಾವತಿ ಆಗಿಲ್ಲ.

7. ರಾಜ್ಯದಲ್ಲಿ ಬಂಡವಾಳ ವೆಚ್ಚ 20% ಕುಸಿತಗೊಂಡು ಅಭಿವೃದ್ಧಿ ಶೂನ್ಯತೆ ಆವರಿಸಿದ್ದರೂ ತಮಗೆ ಯಾವುದೇ ಚಿಂತೆಯಿಲ್ಲ.

8. ಸಿಇಟಿ ಪ್ರಶ್ನೆಪತ್ರಿಕೆ ಎಡವಟ್ಟಿನಿಂದ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದ್ದರೂ ತಮಗೆ ಯಾವುದೇ ಚಿಂತೆಯಿಲ್ಲ.

ಇದನ್ನೂ ಓದಿ: Praveen Nettaru: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಸೆರೆ

9. ಒಂದು ವಾರದೊಳಗೆ ಬಾಕಿ ಬಿಲ್ ಪಾವತಿ ಆಗದಿದ್ದರೆ ಕಾಮಗಾರಿ ಸ್ಥಗಿತಗೊಳಿಸುತ್ತೇವೆ ಎಂದು ಗುತ್ತಿಗೆದಾರರ ಸಂಘದ ಗಡುವು ನೀಡಿದ್ದರೂ ನಿಮ್ಮ ಸರ್ಕಾರ ಕ್ಯಾರೆ ಎನ್ನುತ್ತಿಲ್ಲ.

10. ಹುಬ್ಬಳ್ಳಿಯ ಸಹೋದರಿ ನೇಹಾ ಅವರ ಲವ್ ಜಿಹಾದ್ ಪ್ರಕರಣದಲ್ಲಿ 120 ದಿನಗೊಳಗೆ ನ್ಯಾಯ ಕೊಡಿಸುತ್ತೇನೆ ಎಂದು ಹೇಳಿದ್ದ ತಮಗೆ ಪ್ರಕರಣದ ತನಿಖೆ ಚುರುಕುಗೊಳಿಸುವ ಉದ್ದೇಶವೇ ಇಲ್ಲ.

ಇಷ್ಟೇ ಅಲ್ಲದೆ ರಾಜ್ಯದಲ್ಲಿ ಇಷ್ಟೆಲ್ಲಾ ಸಮಸ್ಯೆಗಳಿದ್ದರೂ, ರಾಜ್ಯದ ರೈತರು, ಮಹಿಳೆಯರು, ಯುವಕರು, ಬಡವರು ಸಾಲು ಸಾಲು ಸಂಕಷ್ಟಗಳನ್ನು ಎದುರಿಸುತ್ತಿದ್ದರೂ ಊಟಿಯಲ್ಲಿ ಮಜಾ ಮಾಡಿಕೊಂಡು, ಪ್ರಧಾನಿ ಮೋದಿ ಅವರ ಬಗ್ಗೆ ಅನಾವಶ್ಯಕ ಟೀಕೆ ಮಾಡುತ್ತಾ ಚುನಾವಣೆ ನಂತರವೂ ರಾಜಕೀಯ ಮಾಡುತ್ತಿರುವ ತಮಗೆ ನಿಜಕ್ಕೂ ನಾಚಿಕೆ ಆಗಬೇಕು.

'ಒಂದು ರಾಜ್ಯದ ಮುಖ್ಯಮಂತ್ರಿಯಾಗಿ, ದೇಶದ ಪ್ರಧಾನಮಂತ್ರಿಯಾಗಿ ಕಳೆದ 23 ವರ್ಷಗಳಿಂದ ಸತತವಾಗಿ ಸರ್ಕಾರದ ಮುಖ್ಯಸ್ಥರಾಗಿ ಒಂದು ದಿನವೂ ರಜೆ ತೆಗೆದುಕೊಳ್ಳದೆ ಜನರ ಸೇವೆ ಮಾಡುತ್ತಿರುವ ಮೋದಿ ಅವರೆಲ್ಲಿ ತಾವೆಲ್ಲಿ. ನಾಲ್ಕು ವಾರ ಪ್ರಚಾರ ಮಾಡಿದ್ದಕ್ಕೆ ಊಟಿಯಲ್ಲಿ ಪಾರ್ಟಿ ಮಾಡಲು ಹೋಗಿರುವ ತಮಗೆ ಮೋದಿ ಅವರ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ ಸಿದ್ದರಾಮಯ್ಯನವರೇ ರಾಜ್ಯದ ಜನತೆಯ ಸಂಕಷ್ಟಗಳಿಗೆ ಸ್ಪಂದಿಸದೆ ಊಟಿಯಲ್ಲಿ ಮಜಾ ಮಾಡಲು ಹೋಗಿರುವ ತಮಗೆ ರಾಜ್ಯದ ಜನರ ಬಗ್ಗೆ ಎಷ್ಟು ಮಾತ್ರ ಬದ್ಧತೆ ಇದೆ ಅಂತ ತಾವೇ ಜಗಜ್ಜಾಹೀರು ಮಾಡಿದ್ದೀರಿ' ಎಂದು ಕಿಡಿಕಾರಿದ್ದಾರೆ.

Advertisement
Advertisement
Next Article