For the best experience, open
https://m.hosakannada.com
on your mobile browser.
Advertisement

D K Suresh: ಸಿಎಂ ಬದಲಾವಣೆ ಬಗ್ಗೆ ಸ್ವಾಮೀಜಿ ಹೇಳಿಕೆ ವಿಚಾರ - ಅಚ್ಚರಿ ಸ್ಟೇಟ್ಮೆಂಟ್ ಕೊಟ್ಟ ಡಿ ಕೆ ಸುರೇಶ್!!

D K Suresh: ಚಂದ್ರಶೇಖರನಾಥ ಸ್ವಾಮೀಜಿ(Chnadrashekaranatha Swamiji) ಹೇಳಿಕೆ ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಪರ-ವಿರೋಧದ ಚರ್ಚೆಗಳು ಶುರುವಾಗಿದ್ದವು.
01:27 PM Jun 29, 2024 IST | ಸುದರ್ಶನ್
UpdateAt: 01:27 PM Jun 29, 2024 IST
d k suresh   ಸಿಎಂ ಬದಲಾವಣೆ ಬಗ್ಗೆ ಸ್ವಾಮೀಜಿ ಹೇಳಿಕೆ ವಿಚಾರ   ಅಚ್ಚರಿ ಸ್ಟೇಟ್ಮೆಂಟ್ ಕೊಟ್ಟ ಡಿ ಕೆ ಸುರೇಶ್

D K Suresh: ಸಿದ್ದರಾಮಯ್ಯ ಎದುರಲ್ಲೇ ಸಿಎಂ ಪಟ್ಟವನ್ನು ಡಿ ಕೆ ಶಿವಕುಮಾರ್ ಗೆ ಬಿಟ್ಟುಕೊಡಬೇಕೆಂದು ಚಂದ್ರಶೇಖರನಾಥ ಸ್ವಾಮೀಜಿ(Chnadrashekaranatha Swamiji) ಹೇಳಿಕೆ ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಪರ-ವಿರೋಧದ ಚರ್ಚೆಗಳು ಶುರುವಾಗಿದ್ದವು. ಇದೀಗ ಈ ಬಗ್ಗೆ ಡಿ ಕೆ ಸುರೇಶ್(D K Suresh) ಅವರು ಅಚ್ಚರಿ ಸ್ಟೇಟ್ಮೆಂಟ್ ನೀಡಿದ್ದಾರೆ.

Advertisement

Belthangady: ಸಂತೆಕಟ್ಟೆ ಬಳಿ ಸರಕಾರಿ ಬಸ್ಸು ಮತ್ತು ಖಾಸಗಿ ಬಸ್‌ ನಡುವೆ ಮುಖಾಮುಖಿ ಅಪಘಾತ

ಕೆಲವು ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ (Chandrashekharnath Swamiji) ಅವರು ಸಿದ್ದರಾಮಯ್ಯನವರ ಮುಂದೆಯೇ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿದ್ದರು. ಅಲ್ಲದೆ ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಧ್ಯ. ಈಗಾಗಲೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ(CM Siddaramaiah) ಆಗಿ ಅನುಭವ ಹೊಂದಿದ್ದಾರೆ. ನಮ್ಮ ಸಮುದಾಯದ ಡಿ.ಕೆ ಶಿವಕುಮಾರ್ ಅವರಿಗೆ ಮುಂದೆ ಅವಕಾಶ ಮಾಡಿಕೊಡಲಿ ಎಂದು ಬೇಡಿಕೆ ಇಟ್ಟಿದ್ದಾರು.

Advertisement

ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಂಸದ ಡಿ ಕೆ ಸುರೇಶ್ ಅವರು ಸ್ವಾಮೀಜಿಗಳು ಸಮುದಾಯದ ಪರವಾಗಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಆದರೆ ಮುಖ್ಯಮಂತ್ರಿ ಅಯ್ಕೆ, ಬದಲಾವಣೆ ಇದನ್ನೆಲ್ಲ ನಿರ್ಧರಿಸುವುದು ಹೈಕಮಾಂಡ್. ಅಲ್ಲದೆ ಸದ್ಯ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾರೆ. ಸಿಎಂ ಸ್ಥಾನ ಕಾಲಿ ಇಲ್ಲ. ಆ ಸ್ಥಾನ ಕಾಲಿ ಆದಾಗ ಈ ಬಗ್ಗೆ ಚರ್ಚೆ ಮಾಡೋಣ. ಮುಂದೆ ನೋಡೋಣ ಎಂದು ಹೇಳಿದ್ದಾರೆ.

Viral Video: ರಾತ್ರಿ ಮಲಗಿದವನ ಚಡ್ಡಿಯೊಳಗೆ ಸೇರಿದ ನಾಗರಹಾವು – ಹೊರ ಬರುವ ಮುನ್ನ ಒಳಗೆ ಮಾಡಿದ್ದೇನು?

Advertisement
Advertisement
Advertisement