For the best experience, open
https://m.hosakannada.com
on your mobile browser.
Advertisement

Davanagere: ಬಾಲರಾಮನ ಪ್ರಾಣಪ್ರತಿಷ್ಠಾಪನೆ; ಆಂಜನೇಯನ ವಿಗ್ರಹ ಪ್ರತಿಷ್ಠಾಪನೆ ವೇಳೆ ಕೋತಿರಾಯ ಪ್ರತ್ಯಕ್ಷ!! ಜನರಿಗೆ ಅಚ್ಚರಿಯೋ ಅಚ್ಚರಿ

09:35 PM Jan 21, 2024 IST | ಹೊಸ ಕನ್ನಡ
UpdateAt: 09:39 PM Jan 21, 2024 IST
davanagere  ಬಾಲರಾಮನ ಪ್ರಾಣಪ್ರತಿಷ್ಠಾಪನೆ  ಆಂಜನೇಯನ ವಿಗ್ರಹ ಪ್ರತಿಷ್ಠಾಪನೆ ವೇಳೆ ಕೋತಿರಾಯ ಪ್ರತ್ಯಕ್ಷ   ಜನರಿಗೆ ಅಚ್ಚರಿಯೋ ಅಚ್ಚರಿ
Image Credit Source: Asianet Suvarna News
Advertisement

Davanagere: ಜ22 ರಂದು ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ನಡೆಯಲಿದೆ. ಈ ಕಾರಣದಿಂದ ದಾವಣಗೆರೆ ತಣಿಗೆರೆ ಗ್ರಾಮಸ್ಥರು ಆಂಜನೇಯ ವಿಗ್ರಹ ಪ್ರತಿಷ್ಠಾಪನೆ ಮಾಡಲು ಸಿದ್ಧತೆ ನಡೆಸುತ್ತಿರುವಾಗ ಒಂದು ಅಚ್ಚರಿ ನಡೆದಿದೆ. ಆಂಜನೇಯ ಪ್ರತಿಷ್ಠಾಪನೆ ಸಂದರ್ಭ ಯಾವತ್ತೂ ಎಲ್ಲೂ ಕಾಣದ ಮುಸಿಯಾ ಪ್ರತ್ಯಕ್ಷವಾಗಿದೆ.

Advertisement

ಇದು ಗ್ರಾಮಸ್ಥರಲ್ಲಿ ನಿಜಕ್ಕೂ ಅಚ್ಚರಿ ಮೂಡಿಸಿದೆ. ಈಘಟನೆ ಚನ್ನಗಿರಿ ತಾಲೂಕಿನ ತಣಿಗೆರೆ ಗ್ರಾಮದಲ್ಲಿ ನಡೆದಿದೆ. ಸರಿಯಾಗಿ ಆಂಜನೇಯನ ವಿಗ್ರಹ ಪ್ರತಿಷ್ಠಾಪನೆ ಸಮಯದಲ್ಲಿ ಈ ಕೋತಿ ಕಾಣಿಸಿಕೊಂಡಿದ್ದು, ಅಲ್ಲಿ ತನಕ ಈ ಕೋತಿಗಳು ಎಲ್ಲೂ ಕಾಣಿಸಿಕೊಂಡಿಲ್ಲ ಎಂದು ಗ್ರಾಮಸ್ಥರು ಹೇಳುತ್ತಾರೆ.

ಈ ಘಟನೆ ಈಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಸ್ವತಃ ಆಂಜನೇಯನೇ ಗ್ರಾಮಕ್ಕೆ ಆಗಮಿಸಿದ್ದಾಗಿ ಗ್ರಾಮಸ್ಥರು ಅಭಿಪ್ರಾಯಪಟ್ಟಿದ್ದಾರೆ.

Advertisement

Advertisement
Advertisement
Advertisement