ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Dengue: ರಾಜ್ಯದಲ್ಲಿ ಡೆಂಗ್ಯೂಗೆ ಮೊದಲ ಬಲಿ

Dengue Fever: ಮಳೆಯ ನಡುವೆ ಇದೀಗ ರಾಜ್ಯದಲ್ಲಿ ಮತ್ತೆ ಡೆಂಗ್ಯೂ ಮಹಾಮಾರಿಯ ಆರ್ಭಟ ಶುರುವಾಗಿದೆ. ರಾಜ್ಯದಲ್ಲಿ ಇದೀಗ ಸಾಗರದಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ.
12:05 PM Jun 13, 2024 IST | ಸುದರ್ಶನ್
UpdateAt: 12:08 PM Jun 13, 2024 IST
Image Credit: India.com
Advertisement

Dengue Fever: ಮಳೆಯ ನಡುವೆ ಇದೀಗ ರಾಜ್ಯದಲ್ಲಿ ಮತ್ತೆ ಡೆಂಗ್ಯೂ ಮಹಾಮಾರಿಯ ಆರ್ಭಟ ಶುರುವಾಗಿದೆ. ರಾಜ್ಯದಲ್ಲಿ ಇದೀಗ ಸಾಗರದಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿಯೇ ಸಾವಿಗೀಡಾದವರು. ಆರೋಗ್ಯ ಇಲಾಖೆ ಸಿಬ್ಬಂದಿ ಡೆಂಗ್ಯೂನಿಂದ ಮೃತಪಟ್ಟಿದ್ದಾರೆ ಎಂದು ಸಾಗರ ತಾಲ್ಲೂಕು ವೈದ್ಯಾಧಿಕಾರಿ ಡಾ.ಪರಪ್ಪ ದೃಢಪಡಿಸಿದ್ದಾರೆ.

Advertisement

ರೇಣುಕಾ ಸ್ವಾಮಿ ಹತ್ಯೆ ಪ್ರಕರಣ; ಕನ್ನಡದ ಮತ್ತೊಬ್ಬ ನಟ ಅರೆಸ್ಟ್ !!

ಸಾಗರ ತಾಲ್ಲೂಕು ಆಸ್ಪತ್ರೆಯಲ್ಲಿ ಡಾಲಿಸಿಸ್‌ ಸಿಬ್ಬಂದಿ ನಾಗರಾಜ್‌ (35) ಎಂಬುವವರೇ ಡೆಂಗ್ಯೂನಿಂದ ಸಾವಿಗೀಡಾದ ವ್ಯಕ್ತಿ.

Advertisement

ನಾಗರಾಜ್‌ ಅವರು ಕೆಳೆದ ಕೆಲಸ ದಿನಗಳಿಂದ ಡೆಂಗ್ಯೂವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ಡೆಂಗ್ಯೂಗೆ ಇವರು ಸಾವಿಗೀಡಾಗಿದ್ದಾರೆ.

ನಾಗರಾಜ್‌ ಅವರು ಶುಗರ್‌ ನಿಂದ ಬಳಲುತ್ತಿದ್ದು, ಇವರ ಪ್ಲೇಟ್‌ಲೇಟ್ಸ್‌ 26000 ಕಡಿಮೆಗೆ ಕುಸಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಆರೋಗ್ಯ ಇಲಾಖೆ ಸಿಬ್ಬಂದಿ ಸಾವಿಗೀಡಾಗಿದ್ದಾರೆ.

7th Pay Commission: ಶೀಘ್ರದಲ್ಲಿ ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆ! ಸಂಪುಟ ಸಭೆಯಲ್ಲಿ ಮಹತ್ವ ನಿರ್ಧಾರ!

Advertisement
Advertisement