ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Excise Scam : ಅರವಿಂದ್ ಕೇಜ್ರಿವಾಲ್ಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್ ಜಾರಿ

12:57 PM Mar 07, 2024 IST | ಹೊಸ ಕನ್ನಡ
UpdateAt: 12:59 PM Mar 07, 2024 IST
Advertisement

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಇಡಿ ಸಮನ್ಸ್ ನೀಡಿದ ಹೊರತಾಗಿಯೂ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಏಜೆನ್ಸಿಯ ಮುಂದೆ ಹಾಜರಾಗುತ್ತಿಲ್ಲ ಎಂದು ಎನ್ಫೋರ್ಸ್ಮೆಂಟ್ ಡೈರೆಕ್ಟರೇಟ್ (ಇಡಿ) ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಗುರುವಾರ ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿ ಮಾಡಿದೆ.

Advertisement

ಇದನ್ನೂ ಓದಿ: Anna malai: ಲೋಕಸಭಾ ಚುನಾವಣೆಗೆ ಕರ್ನಾಟಕದಿಂದ ಅಣ್ಣಾ ಮಲೈ ಕಣಕ್ಕೆ?! ಯಾವ ಕ್ಷೇತ್ರದಿಂದ ಗೊತ್ತಾ?

ರೌಸ್ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ದಿವ್ಯಾ ಮಲ್ಹೋತ್ರಾ ಅವರು ಸಮನ್ಸ್ ಜಾರಿಗೊಳಿಸಿ, ಮಾರ್ಚ್ 16ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ಸೂಚಿಸಿದರು.

Advertisement

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ತನಿಖಾ ಸಂಸ್ಥೆಯ ಮುಂದೆ ಹಾಜರಾಗಲು ಕೇಜ್ರಿವಾಲ್ ಅವರಿಗೆ ಹಲವಾರು ಬಾರಿ ಸಮನ್ಸ್ ನೀಡಲಾಗಿತ್ತು, ಆದರೆ ಅವರು ಹಾಜರಾಗಲು ನಿರಾಕರಿಸಿದ್ದಾರೆ ಎಂದು ವಾದಿಸಿ ಮಾರ್ಚ್ 6 ರಂದು ಇ.ಡಿ. ಕೇಜ್ರಿವಾಲ್ ವಿರುದ್ಧ ಹೊಸ ಪ್ರಕರಣವನ್ನು ದಾಖಲಿಸಿತ್ತು.

ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಮಾರ್ಚ್ 4 ರಂದು ಎಂಟನೇ ಬಾರಿಗೆ ಇಡಿ ಮುಂದೆ ಹಾಜರಾಗಲು ನಿರಾಕರಿಸಿದ ನಂತರ ಹೊಸ ದೂರು ದಾಖಲಿಸಲಾಗಿದೆ. ಅವರನ್ನು ಮೊದಲ ಬಾರಿಗೆ ನವೆಂಬರ್ 2,2023 ರಂದು ವಿಚಾರಣೆಗೆ ಕರೆಸಲಾಗಿತ್ತು.

Advertisement
Advertisement