ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

NEET Scam: ಸೂಕ್ತ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ !

NEET Scam: ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ (NTA) ನಡೆಸಿದ್ದ ನೀಟ್ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸುವಂತೆ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಒತ್ತಾಯಿಸಿದ್ದಾರೆ.
06:13 PM Jun 07, 2024 IST | ಸುದರ್ಶನ್
UpdateAt: 06:13 PM Jun 07, 2024 IST
Advertisement

NEET Scam: ವೈದ್ಯಕೀಯ ಕೋರ್ಸ್‌ನ ಪ್ರವೇಶಕ್ಕೆ ನಡೆದಿದ್ದ, ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ (NTA) ನಡೆಸಿದ್ದ ನೀಟ್ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸುವಂತೆ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಒತ್ತಾಯಿಸಿದ್ದಾರೆ.

Advertisement

Neet ವಿದ್ಯಾರ್ಥಿಗಳ ಸಾವಿನ ಸರಮಾಲೆ, ರಾಜಸ್ಥಾನದಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ, ಸಾವಿನ ಸಂಖ್ಯೆ 11ಕ್ಕೆ ಏರಿಕೆ

Advertisement

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET) ಕೆಲವರಿಗೆ ಹೆಚ್ಚು ಅಂಕಗಳು ಬಂದಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ಹಲವು ನೀಟ್ ಆಕಾಂಕ್ಷಿಗಳು ಆರೋಪಿಸಿದ್ದಾರೆ. ಈ ಕಾರಣದಿಂದಲೇ ಒಂದೇ ಪರೀಕ್ಷಾ ಕೇಂದ್ರದ 6 ಅಭ್ಯರ್ಥಿಗಳು ಸೇರಿದಂತೆ 67 ಅಭ್ಯರ್ಥಿಗಳು ಪ್ರಥಮ ರ್ಯಾಂಕ್ ಪಡೆಯಲು ಸಾಧ್ಯವಾಗಿದೆ ಎಂದು ಅಶೋಕ್ ಗೆಹ್ಲೋಟ್ ದೂರಿದ್ದಾರೆ.

ಆದರೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು (NTA) ಈ ಕುರಿತ ಯಾವುದೇ ಆರೋಪಗಳನ್ನು ನಿರಾಕರಿಸಿದೆ. ಹೇಳಿಕೆ ನೀಡಿದ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಬದಲಾವಣೆಯಾಗಿರುವುದು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಸಮಯ ನಷ್ಟವಾದವರಿಗೆ ಗ್ರೇಸ್ ಅಂಕ ದೊರೆತಿರುವುದರಿಂದ ಕೆಲವು ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಪಡೆದಿದ್ದಾರೆ ಎಂದು ಹೇಳಿದೆ. ಆದರೆ ಒಂದೇ ಕೇಂದ್ರದ ವಿದ್ಯಾರ್ಥಿಗಳಿಗೆ ಹೇಗೆ 6 ಜನರಿಗೆ ಟಾಪರ್ ಸ್ಥಾನ ಸಿಕ್ಕಿದೆ ಎನ್ನುವ ಬಗ್ಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮೌನವಹಿಸಿದೆ.

'ವಿದ್ಯಾರ್ಥಿಗಳು ನೀಟ್ ಪರೀಕ್ಷೆಯ ಅಕ್ರಮಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಒಂದೇ ಕೇಂದ್ರದ ಹಲವು ವಿದ್ಯಾರ್ಥಿಗಳು ಪೂರ್ಣ ಅಂಕ ಪಡೆದಿರುವುದು ಮತ್ತು ಪರೀಕ್ಷಾ ಕೇಂದ್ರದಲ್ಲಿ ಹತ್ತಿರ ಕೂಟ ಎಲ್ಲ ವಿದ್ಯಾರ್ಥಿಗಳು ಅಗ್ರಸ್ಥಾನ ಪಡೆದಿರುವುದು ಸೇರಿದಂತೆ ಇಂತಹ ಹಲವು ಅಂಶಗಳನ್ನು ಗಮನಿಸಿದರೆ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿರುವ ಶಂಕೆ ಬಲವಾಗಿದೆ. ಇದು ಲಕ್ಷಾಂತರ ಮಕ್ಕಳ ಭವಿಷ್ಯ ಮತ್ತು ವೈದ್ಯಕೀಯ ವೃತ್ತಿಯ ವಿಶ್ವಾಸಾರ್ಹತೆಯ ಪ್ರಶ್ನೆಯಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ಮತ್ತು NTA ತಕ್ಷಣ ತನಿಖೆ ನಡೆಸಿ ಅರ್ಹ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಅಶೋಕ್ ಗೆಹ್ಲೋಟ್ ಅವರಿಗೆ ಆಗ್ರಹಿಸಿದ್ದಾರೆ.

ಮಂಗಳೂರು: ಕಾರಿನ ಬಿಡಿಭಾಗಗಳ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ

Advertisement
Advertisement