Gruhalakshmi Scheme : ಯಜಮಾನಿಯರಿಗೆ ಬಿಗ್ ಶಾಕ್- ಗೃಹಲಕ್ಷ್ಮೀ ದುಡ್ಡು ಬರದಿರಲು ಬಯಲಾಯ್ತು ಹೊಸ ಕಾರಣ !!
Gruhalakshmi Scheme : ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಯ (Gurha Lakshmi Yojana)ಮೂಲಕ ಪ್ರತೀ ಮನೆಯ ಯಜಮಾನಿಗೆ ಪ್ರತೀ ತಿಂಗಳು 20000 ರೂಪಾಯಿ ಹಣವನ್ನು ಬ್ಯಾಂಕ್ ಖಾತೆಗೆ ನೇರ ವರ್ಗಾವಣೆ (DBT)ಜಮೆ ಮಾಡಲಾಗುತ್ತಿದೆ. ಈ ನಡುವೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಯೋಜನೆಯ ಕುರಿತಂತೆ ಬಿಗ್ ಅಪ್ಡೇಟ್ ನೀಡಿದ್ದಾರೆ.
ನಿಮ್ಮ ರೇಷನ್ ಕಾರ್ಡ್ ಗೆ KYC ಅಪ್ಲೇಟ್ ಆಗಿದೆಯೇ ಎನ್ನುವುದನ್ನು ಮೊದಲು ಖಾತ್ರಿ ಮಾಡಿಕೊಳ್ಳಿ. ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ KYC ಅಪ್ಲೇಟ್ ಮಾಡಿಕೊಳ್ಳಬೇಕು. ಎಲ್ಲವೂ ಸರಿಯಾಗಿದ್ದು, ಹಣ ಬಾರದೇ ಇದ್ದರೆ ಆಗ ನೀವು ದೂರು ಕೊಡಬಹುದು. ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿರುವ ಫಲಾನುಭವಿಗಳಲ್ಲಿ ಮೊದಲ ಕಂತಿನ ಹಣ ಬಂದಿಲ್ಲ ಎಂದಾದರೆ ಮೊದಲ ನಿಮ್ಮ ಬ್ಯಾಂಕ್ಗಳಲ್ಲಿ ಇ-ಕೆವೈಸಿ ಹಾಗೂ ಆಧಾರ್ ಜೋಡಣೆ ಮಾಡಿದರೆ ಈ ಯೋಜನೆಯ ಹಣ ಜಮಾ ಆಗಲಿದೆ. ಇದಲ್ಲದೇ, ಹಣ ಜಮೆಯಾಗದೇ ಇರುವವರು ತಮ್ಮ ಖಾತೆ ಹೊಂದಿರುವ ಬ್ಯಾಂಕ್ಗಳಿಗೆ ಭೇಟಿ ನೀಡಿ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ತುಂಬಿಸಿ ಒಮ್ಮೆ ಚೆಕ್ ಮಾಡಿ.
ಆಹಾರ ಇಲಾಖೆಯ ವೆಬ್ ಸೈಟ್ ನಲ್ಲಿ ನೀವು ನಿಮ್ಮ ಖಾತೆಗೆ ಹಣ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು. ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿರುವ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಕೂಡ ಬಂದಿರುವ ಸಾಧ್ಯತೆ ಇದೆ. ನಿಮ್ಮ ಬ್ಯಾಂಕ್ ಸಕ್ರಿಯವಾಗಿದೆಯೇ ಚೆಕ್ ಮಾಡಿಕೊಳ್ಳಿ.
DBT Karnataka mobile application & ಲೋಡ್ ಮಾಡಿಕೊಂಡು ಆಧಾರ್ ಸಂಖ್ಯೆಯನ್ನು ಎಂಟ್ರಿ ಮಾಡಿ ಲಾಗಿನ್ ಆದರೆ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಹಣ ಸಂದಾಯ ಆಗಿರುವ ಬಗ್ಗೆ ಮಾಹಿತಿ ಸಿಗಲಿದೆ. ಗೃಹಲಕ್ಷ್ಮಿ ಯೋಜನೆಯ 2 ಸಾವಿರ ನಿಮ್ಮ ಖಾತೆಗೆ ಜಮಾ ಆದ ಕೂಡಲೇ ಸಂದೇಶ ಬರಲಿದೆ. ಆದರೆ ಕೆಲವು ತಾಂತ್ರಿಕ ದೋಷಗಳಿಂದ ಈ ಮೆಸೇಜ್ ಬಾರದೇ ಇದ್ದಲ್ಲಿ ನೀವು ಬ್ಯಾಂಕ್ ಗೆ ಹೋಗಿ ಚೆಕ್ ಮಾಡಬೇಕಾಗುತ್ತದೆ.