For the best experience, open
https://m.hosakannada.com
on your mobile browser.
Advertisement

High Court: ಕಾನೂನು ಗೌರವಿಸದ ಪೊಲೀಸ್ ಅಧಿಕಾರಿಗೆ ನ್ಯಾಯಾಲಯವು ಯಾವುದೇ ಸಹಾನುಭೂತಿ ತೋರಿಸಲು ಸಾಧ್ಯವಿಲ್ಲ : ಕರ್ನಾಟಕ ಹೈಕೋರ್ಟ್

High Court: ನ್ಯಾಯಾಧೀಶರನ್ನು ನಿಂದಿಸಿದ ಆರೋಪದ ಮೇಲೆ ಇನ್ಸ್‌ಪೆಕ್ಟ‌ರ್ ಹರೀಶ್ ವಿರುದ್ಧ ದೂರಿನ ವಿಚಾರಣೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.
06:41 AM Apr 01, 2024 IST | ಸುದರ್ಶನ್
UpdateAt: 06:59 AM Apr 01, 2024 IST
high court  ಕಾನೂನು ಗೌರವಿಸದ ಪೊಲೀಸ್ ಅಧಿಕಾರಿಗೆ  ನ್ಯಾಯಾಲಯವು ಯಾವುದೇ ಸಹಾನುಭೂತಿ ತೋರಿಸಲು ಸಾಧ್ಯವಿಲ್ಲ   ಕರ್ನಾಟಕ ಹೈಕೋರ್ಟ್

High Court: ಜಾಮೀನು ಆದೇಶವನ್ನು ಹರಿದು ನ್ಯಾಯಾಧೀಶರನ್ನು ನಿಂದಿಸಿದ ಆರೋಪದ ಮೇಲೆ ಪೊಲೀಸ್ ಇನ್ಸ್‌ಪೆಕ್ಟ‌ರ್ ಹರೀಶ್ ವಿರುದ್ಧದ ದೂರಿನ ವಿಚಾರಣೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

Advertisement

ಇದನ್ನೂ ಓದಿ: Uttar Pradesh: ಹಿಂದೂ ಸಾಧುವನ್ನು ಮನಬಂದಂತೆ ಥಳಿಸಿ ಹಲ್ಲೆ ನಡೆಸಿದ ಪಾಪಿಗಳು - ಭಯಾನಕ ವಿಡಿಯೋ ವೈರಲ್!!

"ಕೋರ್ಟ್ ಆರೋಪಿಯೊಬ್ಬನಿಗೆ ನೀಡಿದ್ದ ಜಾಮೀನು ಆದೇಶವನ್ನು ಹರಿದು ಹಾಕಿ ಅದನ್ನು, ನೆಲದ ಮೇಲೆ ಎಸೆದು, ಜಾಮೀನು ನೀಡಿದ ಸೆಷನ್ಸ್ ನ್ಯಾಯಾಧೀಶರನ್ನು ಕೆಟ್ಟದಾಗಿ ನಿಂದಿಸಿದ್ದು, ಅವರ ಪೊಲೀಸ್‌ ಠಾಣೆಗೆ ತಾವೇ ನ್ಯಾಯಾಧೀಶರಂತೆ ವರ್ತಿಸಿದ್ದು, ಇಂತಹ ಪೊಲೀಸ್ ಅಧಿಕಾರಿಯನ್ನು ಕಾನೂನು ಪ್ರಕಾರ ವಿಚಾರಣೆಗೆ ಒಳಪಡಿಸಿ ಶಿಕ್ಷಿಸಬೇಕು. ನ್ಯಾಯಾಲಯ ಈ ಅಧಿಕಾರಿಯ ಬಗ್ಗೆ ಯಾವುದೇ ಸಹಾನುಭೂತಿಯನ್ನು ತೋರಿಸಲು ಸಾಧ್ಯವಿಲ್ಲ ಹೀಗಾಗಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು  ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶ ನಟರಾಜ್ ಅವರು ಪೋಲಿಸ್ ಇನ್ಸ್ಪೆಕ್ಟರ್ ಹರೀಶ್ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ್ದಾರೆ.

Advertisement

ಇದನ್ನೂ ಓದಿ: Pratap Simha : ನನಗೆ ಸೀಟ್ ತಪ್ಪಿಸಿದ್ದು ಯಾರೆಂಬುದರ ಬಗ್ಗೆ ಮಾತನಾಡಿದ ಪ್ರತಾಪ್ ಸಿಂಹ !!

ಹರೀಶ್‌ನಿಂದ ಇಂತಹ ಕೃತ್ಯ ಎಸಗಿದ್ದಕ್ಕಾಗಿ ಇಲಾಖಾ ವಿಚಾರಣೆ ನಡೆಸುವ ಮೂಲಕ ಪೊಲೀಸ್ ಇಲಾಖೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್ ಹೇಳಿದೆ.

ದೂರುದಾರರಿಗೆ ಜಾಮೀನು ಮಂಜೂರು ಮಾಡಿದ ಸೆಷನ್ಸ್ ನ್ಯಾಯಾಧೀಶರನ್ನು ನಿಂದಿಸಿದ್ದು ಮಾತ್ರವಲ್ಲದೆ ದೂರುದಾರರ ವಿರುದ್ಧ ಸುಳ್ಳು ಪ್ರಕರಣಗಳನ್ನು ಹಾಕುವ ಮೂಲಕ ರೌಡಿ ಶೀಟ್ ತೆರೆಯುವುದಾಗಿ ಬೆದರಿಕೆ ಹಾಕಿದ್ದಾರೆ ಮತ್ತು ಎನ್‌ಕೌಂಟರ್‌ನಲ್ಲಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ನ್ಯಾಯಾಲಯದಲ್ಲಿ ಹರೀಶ್ ವಿರುದ್ಧ ಈ ಕೆಳಗಿನ ಪ್ರಕರಣಗಳು ದಾಖಲಾಗಿವೆ :

ಕಾನೂನು ನಿರ್ದೇಶನವನ್ನು ಉಲ್ಲಂಘಿಸಿದ್ದರಿಂದ ಐಪಿಸಿಯ ಸೆಕ್ಷನ್ 166 ಎ,

ಐಪಿಸಿ ಸೆಕ್ಷನ್ 340 ದೂರುದಾರರನ್ನು ತಪ್ಪಾಗಿ ಬಂಧಿಸಿದಕ್ಕೆ, ಐಪಿಸಿಯ ಸೆಕ್ಷನ್ 350 ದೂರುದಾರರ ಮೇಲೆ ಕ್ರಿಮಿನಲ್‌ ಬಲವನ್ನು ತೋರಿಸಿದ್ದಕ್ಕಾಗಿ, ಐಪಿಸಿಯ ಸೆಕ್ಷನ್ 499 ನ್ಯಾಯಾಂಗದ ಪ್ರತಿಷ್ಠೆಗೆ ಹಾನಿ ಮಾಡುವ ಮಾತುಗಳು, ಸೆಕ್ಷನ್ 506 ಕ್ರಿಮಿನಲ್ ಬೆದರಿಕೆ ಮತ್ತು ಸೆಕ್ಷನ್ 25 ಶಸ್ತ್ರಾಸ್ತ್ರ ಕಾಯ್ದೆಯು ಶಸ್ತ್ರಾಸ್ತ್ರವನ್ನು ಅಕ್ರಮವಾಗಿ ಬಳಸಿದ್ದ ಪ್ರಕರಣಗಳನ್ನು ಹರೀಶ್ ಎದುರಿಸುತ್ತಿದ್ದಾರೆ.

2021 ರಲ್ಲಿ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಹರೀಶ್ ಸಬ್ ಇನ್ಸ್ಪೆಕ್ಟರ್ ಆಗಿದ್ದ ಸಮಯದಲ್ಲಿ ನಡೆದ ಪ್ರಕರಣ ಇದಾಗಿದೆ. ಹರೀಶ್ ಅವರ ಈ ವರ್ತನೆಯನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದ ಇಬ್ಬರು ವಕೀಲರು, ಘಟನೆಯ ಪ್ರತ್ಯಕ್ಷದರ್ಶಿಗಳಾಗಿದ್ದು, ಆರೋಪಿ ಪೊಲೀಸ್‌ ಅಧಿಕಾರಿ ನ್ಯಾಯಾಧೀಶರು ಮತ್ತು ದೂರುದಾರ ನಾರಾಯಣಸ್ವಾಮಿ ಅವರ ಬಗ್ಗೆಯೂ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾರೆ. ಹೀಗಾಗಿ, ಅರ್ಜಿದಾರರು ಸಹ ವಿಚಾರಣೆಯನ್ನು ಎದುರಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಕಾನೂನನ್ನು ಗೌರವಿಸದ ಅರ್ಜಿದಾರರಂತಹ ವ್ಯಕ್ತಿಗೆ ನ್ಯಾಯಾಲಯವು ಯಾವುದೇ ಸಹಾನುಭೂತಿ ತೋರಿಸಲು ಸಾಧ್ಯವಿಲ್ಲ ಮತ್ತು ಅವರ ವಿರುದ್ಧದ ಕ್ರಿಮಿನಲ್‌ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ಇದು ಯೋಗ್ಯವಾದ ಪ್ರಕರಣವಲ್ಲ" ಎಂದು ನ್ಯಾಯಾಲಯವು ಅರ್ಜಿಯನ್ನು‌ ವಜಾಗೊಳಿಸುವಾಗ ಹೇಳಿದೆ.

Advertisement
Advertisement