For the best experience, open
https://m.hosakannada.com
on your mobile browser.
Advertisement

Mangaluru: ಮಣ್ಣು ಕುಸಿತ ಪ್ರಕರಣ; ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ ಪರಿಹಾರ

Mangaluru: ಮಣ್ಣು ಕುಸಿದು ಸಾವಿಗೀಡದ ಕಾರ್ಮಿಕ ಚಂದನ್‌ ಕುಮಾರ್‌ ಕುಟುಂಬಕ್ಕೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಎರಡು ಲಕ್ಷ ರೂಪಾಯಿ ಪರಿಹಾರ ನೀಡಿದೆ.
09:04 PM Jul 04, 2024 IST | ಸುದರ್ಶನ್
UpdateAt: 09:04 PM Jul 04, 2024 IST
mangaluru  ಮಣ್ಣು ಕುಸಿತ ಪ್ರಕರಣ  ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ ಪರಿಹಾರ
image credit: TV9 Kannada

Mangaluru:ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಈ ಕಾರಣದಿಂದ ನಿನ್ನೆ (ಬುಧವಾರ) ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತ ಉಂಟಾಗಿ, ಮಣ್ಣಿನಡಿಯಲ್ಲಿ ಸಿಲುಕಿ ಸಾವಿಗೀಡದ ಕಾರ್ಮಿಕ ಚಂದನ್‌ ಕುಮಾರ್‌ ಕುಟುಂಬಕ್ಕೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಎರಡು ಲಕ್ಷ ರೂಪಾಯಿ ಪರಿಹಾರ ನೀಡಿದೆ.

Advertisement

ಮೃತ ಕಾರ್ಮಿಕನ ಪತ್ನಿ ಕಿರಣ ದೇವಿ ಅವರಿಗೆ ಎರಡು ಲಕ್ಷ ರೂ. ಚೆಕ್‌ ಕಳುಹಿಸಿದೆ. ಇದರ ಜೊತೆಗೆ ಕಟ್ಟಡ ನಿರ್ಮಾಣದ ಗುತ್ತಿಗೆದಾರರೂ ಕೂಡಾ ಎರಡು ಲಕ್ಷ ರೂ. ಪರಿಹಾರ ನೀಡಿದ್ದಾರೆ. ಜೊತೆಗೆ ಕಾರ್ಮಿಕ ಪರಿಹಾರ ಕಾಯಿದೆಯಡಿಯಲ್ಲಿ ಕೂಡಾ ಮೃತ ಕಾರ್ಮಿಕನ ಕುಟುಂಬಕ್ಕೆ ವಿಮಾ ಮೊತ್ತ ದೊರಕಲಿದೆ ಎಂದು ಕಾರ್ಮಿಕ ಇಲಾಖೆ ತಿಳಿಸಿದೆ.

School Holiday: ಎಡೆಬಿಡದೆ ಸುರಿಯುತ್ತಿರುವ ಮಳೆ; ನಾಳೆ ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ ಘೋಷಣೆ

Advertisement

Advertisement
Advertisement
Advertisement