Mangaluru Landslide: ಮಂಗಳೂರು ಮಣ್ಣು ಕುಸಿತ ಪ್ರಕರಣ; ಮೂವರ ವಿರುದ್ಧ ಎಫ್ಐಆರ್ ದಾಖಲು
Mangaluru Landslide: ಕಟ್ಟಡ ಕಾಮಗಾರಿ ಸಂದರ್ಭ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವಿಗೀಡಾದ ಪ್ರಕರಣಕ್ಕೆ ಕುರಿತಂತೆ ಇದೀಗ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.
10:27 AM Jul 05, 2024 IST
|
ಸುದರ್ಶನ್
UpdateAt: 10:27 AM Jul 05, 2024 IST
Advertisement
Mangaluru Landslide: ಜುಲೈ 3 ರಂದು ಮಂಗಳೂರಿನ ಬಲ್ಮಠ ಬಳಿ ಕಟ್ಟಡ ಕಾಮಗಾರಿ ಸಂದರ್ಭ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವಿಗೀಡಾದ ಪ್ರಕರಣಕ್ಕೆ ಕುರಿತಂತೆ ಇದೀಗ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.
Advertisement
Advertisement
ಕಟ್ಟಡ ಕಾಮಗಾರಿ ಗುತ್ತಿಗೆದಾರ, ಸೂಪರ್ವೈಸರ್ ಸೇರಿ ಮೂವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಹರ್ಷವರ್ಧನ್, ಸೈಟ್ ಇನ್ಚಾರ್ಜ್ ನಾಗರಾಜ್, ಕಾಮಗಾರಿ ಸ್ಥಳದ ಮುಖ್ಯಸ್ಥ ಸಂತೋಷ್ ಎಂಬುವವರ ಮೇಲೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣ್ಣು ಕುಸಿತ ಪ್ರಕರಣದಲ್ಲಿ ಬದುಕುಳಿದ ಬಿಹಾರ ಮೂಲದ ಕಾರ್ಮಿಕ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಲಾಗಿದೆ. ಲೇಬರ್ ಕಾಂಟ್ರ್ಯಾಕ್ಟರ್ ವೇಣುಗೋಪಾಲ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
KOCHIMUL: ರೈತರಿಗೆ ಬಿಗ್ ಶಾಕ್ – ಹಾಲು ಖರೀದಿ ದರದಲ್ಲಿ 2 ರೂ ಕಡಿತ !!
Advertisement