For the best experience, open
https://m.hosakannada.com
on your mobile browser.
Advertisement

Mangaluru: ತೆಂಕುತಿಟ್ಟಿನ ಹಿರಿಯ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ ನಿಧನ

12:19 PM Jan 24, 2024 IST | ಹೊಸ ಕನ್ನಡ
UpdateAt: 12:19 PM Jan 24, 2024 IST
mangaluru  ತೆಂಕುತಿಟ್ಟಿನ ಹಿರಿಯ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ ನಿಧನ

Mangaluru: ತೆಂಕುತಿಟ್ಟು ಯಕ್ಷಗಾನದ ಯಕ್ಷಲೋಕದಲ್ಲಿ ಮೆರೆದ ಪೆರುವಾಯಿ ನಾರಾಯಣ ಶೆಟ್ಟಿಯವರು ಇಹಲೋಕ ತ್ಯಜಿಸಿದ್ದಾರೆ. ಇವರಿಗೆ 82 ವರ್ಷ ವಯಸ್ಸಾಗಿತ್ತು.

Advertisement

ಬಂಟ್ವಾಳ ತಾಲೂಕಿನ ಪೆರುವಾಯಿಯಲ್ಲಿ ಜನಿಸಿದ್ದ ಇವರು ಕಟೀಲು ಮೇಳವೊಂದರಲ್ಲಿಯೇ 23 ವರ್ಷ ತಿರುಗಾಟ ಮಾಡಿದ್ದರು. ಬಾಕ್ರಬೈಲು ಪಾತೂರಿನಲ್ಲಿ ನೆಲೆಸಿದ್ದ ಇವರು ಮಂಗಳವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ.

ಉಡುಪಿಯ ತುಳುಕೂಟ ಈ ವರ್ಷದ ರಾಮದಾಸ ಸಾಮಗ ನೆಂಪುದ ಪ್ರಶಸ್ತಿಯೂ ಸೇರಿದಂತೆ ಕರ್ನಾಟಕ ಯಕ್ಷಗಾನ ಅಕಾಡೆಮಿ, ಬಂಟರ ಸಂಘ ಬೆಂಗಳೂರು, ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಬಂಟ್ವಾಳ ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮಾನ, ಕಲಾರಂಗ ಉಡುಪಿಯ ಗೌರವ, ಅಖೀಲ ಭಾರತ ತುಳು ಕೂಟ, ಕಾವೂರು ವತಿಯಿಂದ ಸಮ್ಮಾನ, ಯಕ್ಷಸಿಂಧೂರ ವಿಟ್ಲ ಇವರಿಂದ ಸಮ್ಮಾನ ನಡೆದಿದೆ.

Advertisement

ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Advertisement
Advertisement