For the best experience, open
https://m.hosakannada.com
on your mobile browser.
Advertisement

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere: ಈ ಪ್ರಕರಣದ ಪ್ರಮುಖ ಆರೋಪಿ ಸುರೇಶ್‌ ಕಳೆದ ಕೆಲ ದಿನದಿಂದ ನಾಪತ್ತೆಯಾಗಿದ್ದ. ಈತನ ಬಂಧನಕ್ಕೆ ಅರಣ್ಯ ಇಲಾಖೆ ಬಲೆ ಬೀಸಿತ್ತು. 
02:21 PM May 01, 2024 IST | ಸುದರ್ಶನ್
UpdateAt: 02:24 PM May 01, 2024 IST
mudigere  ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere: ಅರಣ್ಯ ಇಲಾಖೆ ಅಧಿಕಾರಿಗಳು. ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೆಂದು ಗುರುತಿಸಿರುವ ಈ ಹಿಂದೆ ಅರಣ್ಯ ಇಲಾಖೆಯಲ್ಲಿ ದಿನಗೂಲಿ ವಾಚರ್‌ ಆಗಿದ್ದ ಕುಂಡ್ರ ಗ್ರಾಮದ ಸುರೇಶ್‌ ಮಂಗಳವಾರ ಮೂಡಿಗೆರೆ ನ್ಯಾಯಾಲಯದ ಸಮೀಪ ವಶಕ್ಕೆ ಪಡೆದಿದ್ದಾರೆ.

Advertisement

ಇದನ್ನೂ ಓದಿ:  SSLC Result: ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ದಿನಾಂಕ ಫಿಕ್ಸ್‌

ಮೂಡಿಗೆರೆ ಸಮೀಪದ ಕುಂಡ್ರ ಎಂಬಲ್ಲಿ ಹುಲಿಯೊಂದನ್ನು ಹತ್ಯೆ ಮಾಡಿರುವ ಕುರಿತು ಮೂಡಿಗೆರೆ ಅರಣ್ಯ ಇಲಾಖೆಯಲ್ಲಿ ಪ್ರಕರಣವೊಂದು ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಐವರನ್ನು ಬಂಧನ ಮಾಡಲಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಸುರೇಶ್‌ ಕಳೆದ ಕೆಲ ದಿನದಿಂದ ನಾಪತ್ತೆಯಾಗಿದ್ದ. ಈತನ ಬಂಧನಕ್ಕೆ ಅರಣ್ಯ ಇಲಾಖೆ ಬಲೆ ಬೀಸಿತ್ತು.

Advertisement

ಇದನ್ನೂ ಓದಿ:  HD Revanna: ಅಶ್ಲೀಲ ವೀಡಿಯೋ ಪ್ರಕರಣ; ದೇವರ ಮೊರೆ ಹೋದ ಹೆಚ್‌ಡಿ ರೇವಣ್ಣ

ಮಂಗಳವಾರ ಸುರೇಶ್‌ ಮೂಡಿಗೆರೆ ನ್ಯಾಯಾಲಯಕ್ಕೆ ಶರಣಾಗಲು ಬರುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ಮೂಡಿಗೆರೆ ನ್ಯಾಯಾಲಯದ ಸಮೀಪ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಹರೆ ಹಾಕಿದ್ದರು. ಸುಮಾರು ಸಂಜೆ 5 ಗಂಟೆಗೆ ಸುರೇಶ್‌ ನ್ಯಾಯಾಲಯದ ಸಮೀಪ ಬಂದಿದ್ದು, ಈತನನ್ನು ಅಲ್ಲಿ ವಶಕ್ಕೆ ಪಡೆಯಲಾಗಿತ್ತು. ವಶಕ್ಕೆ ಪಡೆದು ಮೂಡಿಗೆರೆ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, ನಂತರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರು ಒಪ್ಪಿಸಿದ್ದಾರೆ.

ಆರು ಮಂದಿಯ ಬಂಧನ ಈ ಪ್ರಕರಣದಲ್ಲಿ ಆಗಿದೆ. ಈಗಾಗಲೇ ಬಂಧನದಲ್ಲಿದ್ದ ಐವರು ಆರೋಪಿಗಳು ಜಾಮೀನು ಪಡೆದು ಹೊರಬಂದಿದ್ದಾರೆ.

Advertisement
Advertisement
Advertisement