For the best experience, open
https://m.hosakannada.com
on your mobile browser.
Advertisement

Mysore: ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿದರೆ ಚುನಾವಣೆಯಲ್ಲಿ ನೋಟಾ ಒತ್ತುತ್ತೇವೆ : ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ ಪ್ರತಾಪ್ ಸಿಂಹ ಬೆಂಬಲಿಗರು

06:55 AM Mar 11, 2024 IST | ಹೊಸ ಕನ್ನಡ
UpdateAt: 08:52 AM Mar 11, 2024 IST
mysore  ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿದರೆ ಚುನಾವಣೆಯಲ್ಲಿ ನೋಟಾ ಒತ್ತುತ್ತೇವೆ   ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ ಪ್ರತಾಪ್ ಸಿಂಹ ಬೆಂಬಲಿಗರು

ಮೈಸೂರು : ಲೋಕಸಭೆ ಚುನಾವಣೆಯು ಸಮೀಪಿಸುತ್ತಿದ್ದಂತೆ ಬಿಜೆಪಿ ಪಕ್ಷದಲ್ಲಿ ಟಿಕೆಟ್ಗಾಗಿ ದೊಡ್ಡ ಯುದ್ದವೇ ನಡೆಯುತ್ತಿದೆ. ಇದೀಗ ಕೊಡಗು ಮತ್ತು ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಯಾರನ್ನು ಕಣಕ್ಕಿಳಿಸಲಿದೆ ಎಂಬ ಕುತೂಹಲ ಎಲ್ಲರಲ್ಲಿಯೂ ಮೂಡಿದೆ.

Advertisement

ಇದನ್ನೂ ಓದಿ: Parliament Election: ಸುಮ್ಮನಿದ್ದೆನೆ ಎಂದ ಮಾತ್ರಕ್ಕೆ ಅದು ನನ್ನ ದೌರ್ಬಲ್ಯವಲ್ಲ : ಪಕ್ಷದ ನಾಯಕರಿಗೆ ಎಚ್ಚರಿಕೆ ನೀಡಿದ ಮಾಜಿ ಸಚಿವ ಬಿಸಿ ಪಾಟೀಲ್

ಈಗಾಗಲೇ ಎರಡು ಬಾರಿ ಚುನಾವಣೆಯಲ್ಲಿ ಗೆದ್ದಿರುವ ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿಯ ಟಿಕೆಟ್ ಸಿಗುವ‌ ಸಾಧ್ಯತೆ ಕಡಿಮೆ ಎಂದು ಬಿಜೆಪಿ ಪಾಳಯದಲ್ಲಿಯೇ ಅಪಸ್ವರ ಕೇಳಿ ಬರುತ್ತಿದೆ. ಆದರೆ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ತಪ್ಪಿಸಲು ಪ್ರಯತ್ನಿಸುತ್ತಿರುವವರು ಯಾರು ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.

Advertisement

ಈ ಎಲ್ಲಾ ಜಟಾಪಟಿಗಳ ನಡುವೆ ಪ್ರತಾಪ್ ಸಿಂಹ ಬೆಂಬಲಿಗರು "ಅರಮನೆ ನಗರಿ ಮೈಸೂರಿನಿಂದ ಇಡೀ ರಾಜ್ಯದ ಬಹುತೇಕ ಎಲ್ಲಾ ಭಾಗಗಳಿಗೂ ರೈಲು ಸಂಪರ್ಕ ಕೊಟ್ಟಿದ್ದು ಯುವ ನಾಯಕ ಪ್ರತಾಪ್ ಸಿಂಹ. ಕರ್ನಾಟನವನ್ನೇ ಮತ್ತೆ ಬೆಸೆದ ಪ್ರಗತಿಯ ಹರಿಕಾರ ಪ್ರತಾಪ್ ಸಿಂಹ ಒಂದು ವೇಳೆ ಈ ಬಾರಿ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡದೆ ಹೋದರೆ ಚುನಾವಣೆಯಲ್ಲಿ ನೋಟಾ ಒತ್ತುತ್ತೇವೆ" ಎಂದು ಹೇಳುವ ಮೂಲಕ ರಾಜ್ಯ ಮತ್ತು ಕೇಂದ್ರ ನಾಯಕರಿಗೆ ಎಚ್ಚರಿಕೆಯನ್ನು ರವಾನಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಾಪ್ ಸಿಂಹ ಬೆಂಬಲಿಗರು #PratapSimha4Mysore ಎಂಬ ಹ್ಯಾಶ್ ಟ್ಯಾಗ್ ಹಾಕಿ ಪ್ರತಾಪ್ ಸಿಂಹ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಪೋಸ್ಟ್ ಮಾಡುವ ಮೂಲಕ ಪ್ರತಾಪ್ ಸಿಂಹ ಮತ್ತೊಮ್ಮೆ ಎಂದು ಬರೆದುಕೊಂಡಿದ್ದಾರೆ.

Advertisement
Advertisement