For the best experience, open
https://m.hosakannada.com
on your mobile browser.
Advertisement

NDA Government: ದೇಶದ ಜನರಿಗೆ ಕೇಂದ್ರದಿಂದ ಬಂಪರ್ ಘೋಷಣೆ - ಇನ್ನು ವರ್ಷಕ್ಕೆ ಪ್ರತೀ ಕುಟುಂಬಕ್ಕೆ ಸಿಗಲಿದೆ 10 ಲಕ್ಷ ರೂ !!

NDA Government: ಅಧಿಕಾರಕ್ಕೆ ಬಂದು ತಿಂಗಳಾಗುವುದರೊಳಗೆ ಕೇಂದ್ರ ಸರ್ಕಾರವು ದೇಶಾದ್ಯಂತ ಇರುವ ಬಡ ಜನರಿಗೆ ಬಂಪರ್ ಗಿಫ್ಟ್ ಘೋಷಿಸಿದೆ. ಈ ಮೂಲಕ ಪ್ರತೀ ಕುಟುಂಬಕ್ಕೂ ವರ್ಷಕ್ಕೆ 10 ಲಕ್ಷ ರೂ ಹಣ ಸಿಗಲಿದೆ.
07:57 AM Jul 10, 2024 IST | ಸುದರ್ಶನ್
UpdateAt: 08:07 AM Jul 10, 2024 IST
nda government  ದೇಶದ ಜನರಿಗೆ ಕೇಂದ್ರದಿಂದ ಬಂಪರ್ ಘೋಷಣೆ   ಇನ್ನು ವರ್ಷಕ್ಕೆ ಪ್ರತೀ ಕುಟುಂಬಕ್ಕೆ ಸಿಗಲಿದೆ 10 ಲಕ್ಷ ರೂ
Advertisement

NDA Government: ಅಧಿಕಾರಕ್ಕೆ ಬಂದು ತಿಂಗಳಾಗುವುದರೊಳಗೆ ಕೇಂದ್ರ ಸರ್ಕಾರವು ದೇಶಾದ್ಯಂತ ಇರುವ ಬಡ ಜನರಿಗೆ ಬಂಪರ್ ಗಿಫ್ಟ್ ಘೋಷಿಸಿದೆ. ಈ ಮೂಲಕ ಪ್ರತೀ ಕುಟುಂಬಕ್ಕೂ ವರ್ಷಕ್ಕೆ 10 ಲಕ್ಷ ರೂ ಹಣ ಸಿಗಲಿದೆ.

Advertisement

ಹೌದು, ನರೇಂದ್ರ ಮೋದಿ(PM Modi) ನೇತೃತ್ವದ NDA ಸರ್ಕಾರವು ಸಮಾಜದ ಬಡವರು ಮತ್ತು ದುರ್ಬಲ ವರ್ಗದವರನ್ನು ಆಕರ್ಷಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತರಲು ಸಜ್ಜಾಗುತ್ತಿದೆ. ಮುಂಬರುವ ಬಜೆಟ್ ಅಧಿವೇಶನದಲ್ಲಿ ಬಡ ಸಮುದಾಯಗಳ ಕಲ್ಯಾಣಕ್ಕಾಗಿ ಹಲವಾರು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದ್ದು, ಅದರಲ್ಲಿ ಜಾರಿಗೊಳಿಸುವ ಯೋಜನೆಯೊಂದು ಇದು ಪ್ರತಿ ಕುಟುಂಬಕ್ಕೆ 10 ಲಕ್ಷ ರೂ.ಗಳವರೆಗೆ ಪ್ರಯೋಜನವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.

ಏನಿದು 10 ಲಕ್ಷ ರೂ..?
ಬಡವರು ಮತ್ತು ಮಧ್ಯಮ ವರ್ಗದವರನ್ನು ಹೆಚ್ಚು ಹೆದರಿಸುವುದು ಚಿಕಿತ್ಸೆಯ ವೆಚ್ಚ. ನಾವು ಸರ್ಕಾರಿ ಆಸ್ಪತ್ರೆಗಳಿಗೆ ಹೋಗಲು ಸಾಧ್ಯವಿಲ್ಲ. ಖಾಸಗಿ ವಲಯದಲ್ಲಿ ಬಿಲ್ ಪಾವತಿಸಲು ಸಾಧ್ಯವಿಲ್ಲ. ಆರೋಗ್ಯ ವಿಮೆ ಎಲ್ಲರಿಗೂ ಲಭ್ಯವಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲರಿಗೂ ಉತ್ತಮ ವೈದ್ಯಕೀಯ ಸೇವೆ ಒದಗಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇದರ ಭಾಗವಾಗಿ, ಆರೋಗ್ಯ ವಿಮಾ ಯೋಜನೆ ಆಯುಷ್ಮಾನ್ ಭಾರತ್ ಯೋಜನೆಯನ್ನು ಪರಿಚಯಿಸಲಾಗಿದೆ. ಈ ಮೂಲಕ, ಕುಟುಂಬವು ವರ್ಷಕ್ಕೆ 5 ಲಕ್ಷ ರೂ.ಗಳವರೆಗೆ ಆರೋಗ್ಯ ವಿಮಾ ರಕ್ಷಣೆಯನ್ನು ಪಡೆಯುತ್ತದೆ.

Advertisement

ಆಯುಷ್ಮಾನ್ ಭಾರತ್ ಯೋಜನೆಯ(Ayushman Bharat Yojane) ಲಾಭ ದುಪ್ಪಟ್ಟಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಈ ಹಿಂದೆ, ಈ ಯೋಜನೆಯಡಿ ಒಂದು ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂ.ಗಳ ವಿಮೆ ಮಾಡಲಾಗುತ್ತಿತ್ತು. ಇದನ್ನು ಈಗ 10 ಲಕ್ಷ ರೂ.ಗೆ ಹೆಚ್ಚಿಸಲಾಗುವುದು ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಇದಲ್ಲದೆ.. ಈ ಯೋಜನೆಗೆ ಅರ್ಜಿ ಸಲ್ಲಿಸುವ ಫಲಾನುಭವಿಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವ ಗುರಿಯನ್ನು ಕೇಂದ್ರವು ನಿಗದಿಪಡಿಸಿದೆ ಮತ್ತು ಮೂರು ವರ್ಷಗಳಲ್ಲಿ ಅದನ್ನು ಸಾಧಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯಲ್ಲಿ 70 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ನೀಡಲಾಗುವುದು. ಅವರನ್ನು ತಕ್ಷಣವೇ ಫಲಾನುಭವಿಗಳಾಗಿ ಸೇರಿಸಲಾಗುವುದು. ದೇಶದಲ್ಲಿ ಇಂತಹ ಸುಮಾರು 5 ಕೋಟಿ ಜನರಿದ್ದಾರೆ ಎಂದು ಅಂದಾಜಿಸಲಾಗಿದೆ.

ಏನಿದು ಆಯುಷ್ಮಾನ್ ಭಾರತ್ ಯೋಜನೆ?
ಆಯುಷ್ಮಾನ್ ಭಾರತ್ ಯೋಜನೆಯು, ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಮತ್ತು ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಎಂಬ ಎರಡು ಪರಸ್ಪರ ಸಂಬಂಧಿತ ಘಟಕಗಳನ್ನು ಒಳಗೊಂಡಿದೆ. ಆರೈಕೆಗಾಗಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ ₹5 ಲಕ್ಷದವರೆಗೆ ರಕ್ಷಣೆ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯಡಿ ಯಾವುದೇ ಬಡವರು ದೇಶದ ಯಾವುದೇ ಭಾಗದಲ್ಲಿ ಯೋಜನೆಯ ಲಾಭ ಪಡೆಯಬಹುದು ಮತ್ತು ಈ ಯೋಜನೆಯಡಿ ಒಳಗೊಂಡಿರುವ ಫಲಾನುಭವಿಗೆ ಭಾರತದಾದ್ಯಂತ ಖಾಸಗಿ / ಸಾರ್ವಜನಿಕ ಆಸ್ಪತ್ರೆಗಳಿಂದ ಆರೋಗ್ಯ ಸೌಲಭ್ಯ ಒದಗಿಸಲಾಗುತ್ತದೆ.

ಯೋಜನೆಯ ಸೌಲಭ್ಯ ಪಡೆಯುವುದೇಗೆ?:
ಪ್ರಾಥಮಿಕ, ದ್ವಿತೀಯ ಕ್ಲಿಷ್ಟಕರ ಚಿಕಿತ್ಸೆಗಳು ಮತ್ತು ತೃತೀಯ ಹಂತದ ಕಾಯಿಲೆಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿದ್ದರೆ ಮಾತ್ರ ಅಲ್ಲಿಯೇ ನೀಡಲಾಗುತ್ತದೆ. ಇಲ್ಲದಿದ್ದರೆ ರೆಫರಲ್ ನೀಡಲಾಗುತ್ತದೆ. ರೆಫರಲ್ ಪಡೆದುಕೊಂಡ ರೋಗಿ ತಾನು ಇಚ್ಛಿಸುವ ಯಾವುದೇ ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ಹೃದಯರೋಗ, ಕ್ಯಾನ್ಸರ್, ಮೂತ್ರಪಿಂಡದ ಕಾಯಿಲೆ, ನವಜಾತ ಶಿಶುಗಳ ಕಾಯಿಲೆ ಸೇರಿದಂತೆ ತೃತೀಯ ಹಂತದ ಸುಮಾರು 900 ಚಿಕಿತ್ಸೆಗಳು ಹಾಗೂ ರಸ್ತೆ ಅಪಘಾತ ಸೇರಿದಂತೆ 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು.

'ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ-ಆರೋಗ್ಯ ಕರ್ನಾಟಕದಡಿ ಕೋ ಬ್ರಾಂಡೆಡ್ ಉಚಿತ ಪಿವಿಸಿ ಗುರುತಿನ ಚೀಟಿಗಳನ್ನು ತ್ವರಿತವಾಗಿ ವಿತರಿಸುತ್ತಿದ್ದು, 1.22 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಆಯುಷ್ಮಾನ್ ಭಾರತ ಪ್ರಧಾನ ಮಂತ್ರಿಯವರ ಜನ ಆರೋಗ್ಯ ಯೋಜನೆಯ ಪ್ರಯೋಜನ ಪಡೆಯಲು ಎಲ್ಲರಿಗೂ ಅವಕಾಶ ಕಲ್ಪಿಸಲಾಗಿದೆ.

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ಅಡಿಯಲ್ಲಿ ಎಬಿ-ಎಆರ್ಕೆ ಕಾರ್ಡ್​ನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ 10 ರೂ. ಶುಲ್ಕದೊಂದಿಗೆ ನೀಡಲಾಗುತ್ತದೆ. ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಸೇವಾ ಸಿಂಧು ಕೇಂದ್ರಗಳಲ್ಲಿ 35 ರೂ. ಶುಲ್ಕದೊಂದಿಗೆ ಎಬಿ-ಎಆರ್ಕೆ ಕಾರ್ಡ್ ನೀಡಲಾಗುತ್ತದೆ. ಆಧಾರ್ ಕಾರ್ಡ್ ಮತ್ತು ಪಡಿತರ ಕಾರ್ಡ್ ಗಳನ್ನು ಹಾಜರುಪಡಿಸಿ ಆರೋಗ್ಯ ಕಾರ್ಡ್ ಪಡೆಯಬಹುದು. ಸೌಲಭ್ಯ ಮತ್ತು ಮಾಹಿತಿಗಾಗಿ, ಹತ್ತಿರದ ಸರ್ಕಾರಿ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳು, ಜಿಲ್ಲಾ ಆಸ್ಪತ್ರೆಗಳು, ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳನ್ನು ಸಂಪರ್ಕಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಯುಷ್ಮಾನ್ ಭಾರತ್ ಯೋಜನೆಗೆ ಅಗತ್ಯವಿರುವ ದಾಖಲೆಗಳು
ವಯಸ್ಸು, ಗುರುತಿನ ಚೀಟಿ (ಆಧಾರ್ ಅಥವಾ ಪ್ಯಾನ್ ಕಾರ್ಡ್)
ಸಂಪರ್ಕ ವಿವರಗಳು
ಜಾತಿ ಪ್ರಮಾಣ ಪತ್ರ
ಆದಾಯ ಪ್ರಮಾಣಪತ್ರ (ವರ್ಷಕ್ಕೆ ರೂ. 5 ಲಕ್ಷದವರೆಗಿನ ಆದಾಯದ ಪ್ರಮಾಣಪತ್ರ)
ಈ ಯೋಜನೆಯಡಿಯಲ್ಲಿ ನಿಮ್ಮ ಕುಟುಂಬವನ್ನು ಒಳಗೊಳ್ಳಲು ಡಾಕ್ಯುಮೆಂಟ್ ಪುರಾವೆ ಅಗತ್ಯವಿದೆ.

Mangaluru: ಕರಾವಳಿಗರಿಗೆ ಭೀತಿ ಹುಟ್ಟಿಸಿದ ಖತರ್ನಾಕ್‌ ʼಚಡ್ಡಿ ಗ್ಯಾಂಗ್‌ʼ ಪೊಲೀಸರಿಂದ ಬಂಧನ?

Advertisement
Advertisement
Advertisement