For the best experience, open
https://m.hosakannada.com
on your mobile browser.
Advertisement

ಲಕ್ಷ್ಮೀಶ ತೋಳ್ಪಾಡಿ ಅವರಿಗೆ 2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

06:48 PM Dec 20, 2023 IST | Praveen Chennavara
UpdateAt: 06:48 PM Dec 20, 2023 IST
ಲಕ್ಷ್ಮೀಶ ತೋಳ್ಪಾಡಿ ಅವರಿಗೆ 2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Advertisement

Advertisement

ಪುತ್ತೂರು: ಲಕ್ಷ್ಮೀಶ ತೋಳ್ಪಾಡಿ ಅವರು 2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸಾಹಿತ್ಯ ಅಕಾಡೆಮಿ ವಾರ್ಷಿಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು 24 ಭಾಷೆಗಳಲ್ಲಿ ಬುಧವಾರ (ಡಿ.20) ಪ್ರಕಟಿಸಿದೆ.

Advertisement

ಇದರಲ್ಲಿ 9 ಕವನಗಳು, 6 ಕಾದಂಬರಿಗಳು, 5 ಸಣ್ಣ ಕಥೆಗಳು, 3 ಪ್ರಬಂಧಗಳು ಮತ್ತು 1 ಸಾಹಿತ್ಯ ಅಧ್ಯಯನಗಳು 2023ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಗೆದ್ದಿವೆ.

ಲಕ್ಷ್ಮೀಶ ತೋಳ್ಪಾಡಿ ಅವರು ಬರೆದ “ಮಹಾಭಾರತ ಅನುಸಂಧಾನದ ಭಾರತಯಾತ್ರೆ” ಪ್ರಬಂಧಗಳಿಗೆ ಈ ವಿಶೇಷ ಗೌರವ ದೊರೆತಿದೆ.

ಲೇಖಕ, ಚಿಂತಕ ಮತ್ತು ವಿದ್ವಾಂಸರಾಗಿರುವ ಲಕ್ಷ್ಮೀಶ ತೋಳ್ಪಾಡಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದವರು.

Advertisement
Advertisement
Advertisement