ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Shiradi Ghat: ಶಿರಾಡಿ ಘಾಟ್ ಮತ್ತೆ ಬಂದ್, ಭಾರೀ ಭೂಕುಸಿತ ಸಂಚಾರ ಅಸ್ತವ್ಯಸ್ತ !

03:18 PM Jul 30, 2024 IST | ಸುದರ್ಶನ್
UpdateAt: 03:18 PM Jul 30, 2024 IST
Advertisement

Shiradi Ghat: ವರುಣನ ರುದ್ರ ನರ್ತನಕ್ಕೆ ಮಲೆನಾಡು, ಕರಾವಳಿ ನಲುಗಿ ಹೋಗುತ್ತಿದೆ. ದಿನದಿಂದ ದಿನಕ್ಕೆ ಮಳೆಯ ಅಬ್ಬರ ಹೆಚ್ಚುತ್ತಿದ್ದು ಜನ ಓಡಾಡುವ ರಸ್ತೆಗಳ ಸಂಪರ್ಕ ಕಡಿತಗೊಳ್ಳುತ್ತಿದೆ. ಈಗಾಗಲೇ ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತಗೊಂಡಿದ್ದು, ಇದೀಗ ಶಿರಾಡಿ ಘಾಟ್‌ (Shiradi Ghat)  ರಸ್ತೆ ಸಂಪರ್ಕವೂ ಬಹುತೇಕ ಸದ್ಯದ ಮಟ್ಟಿಗೆ ಬಂದ್‌ ಆಗಿದೆ.

Advertisement

ಸಕಲೇಶಪುರ  ಹಶ್ಚಿಮಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ , ಸಕಲೇಶಪುರದ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ.

ದೊಡ್ಡತಪ್ಪಲು ಸಮೀಪ ಒಂದು ಟ್ಯಾಂಕರ್, ಒಂದು ಟಿಪ್ಪರ್ ಮತ್ತು ಎರಡು ಕಾರುಗಳು ಭೂಕುಸಿತದ ಕೆಸರಿನಲ್ಲಿ ಸಿಲುಕಿಕೊಂಡಿವೆ. ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಭಾರೀ ಭೂಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿದೆ. ಪ್ರಯಾಣಿಕರು ಹಾಗೂ ವಾಹನ ಚಾಲಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

Advertisement

Related News

Advertisement
Advertisement