For the best experience, open
https://m.hosakannada.com
on your mobile browser.
Advertisement

Sullia: ಕಾಂಗ್ರೆಸ್‌ ಕುರಿತು ಅವಹೇಳನಕಾರಿ ಸ್ಟೇಟಸ್‌ ಪ್ರಕರಣ; ಠಾಣೆಗೆ ದೂರು

Sullia: ಕಾಂಗ್ರೆಸ್‌ ಪಕ್ಷ ಹಾಗೂ ಕಾಂಗ್ರೆಸ್‌ ಮತದಾರ ಕುರಿತು ಅವಹೇಳನಕಾರಿ ಸ್ಟೇಟಸ್‌ ಹಾಕಿದ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಾದ ಘಟನೆಯೊಂದು ಜೂ.5 ರಂದು ಪಂಜದಲ್ಲಿ ನಡೆದಿದೆ.
09:43 AM Jun 07, 2024 IST | ಸುದರ್ಶನ್
UpdateAt: 10:00 AM Jun 07, 2024 IST
sullia  ಕಾಂಗ್ರೆಸ್‌ ಕುರಿತು ಅವಹೇಳನಕಾರಿ ಸ್ಟೇಟಸ್‌ ಪ್ರಕರಣ  ಠಾಣೆಗೆ ದೂರು
Advertisement

Sullia: ಕಾಂಗ್ರೆಸ್‌ ಪಕ್ಷ ಹಾಗೂ ಕಾಂಗ್ರೆಸ್‌ ಮತದಾರ ಕುರಿತು ಅವಹೇಳನಕಾರಿ ಸ್ಟೇಟಸ್‌ ಹಾಕಿದ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಾದ ಘಟನೆಯೊಂದು ಜೂ.5 ರಂದು ಪಂಜದಲ್ಲಿ ನಡೆದಿದೆ.

Advertisement

Karnataka Labour Card Scholarship 2024: ನೀವು ನೊಂದಾಯಿತ ಕಟ್ಟಡ ಕಾರ್ಮಿಕರೆ? ಹಾಗಿದ್ದರೆ ಇಲ್ಲಿದೆ ನಿಮಗೆ ಗುಡ್ ನ್ಯೂಸ್!

ಪಂಜದಲ್ಲಿ ಅಂಗಡಿ ವ್ಯವಹಾರ ನಡೆಸುತ್ತಿರುವ ವ್ಯವಹಾರ ನಡೆಸುತ್ತಿರುವ ವ್ಯಕ್ತಿಯೊಬ್ಬರು ಕಾಂಗ್ರೆಸ್‌ ಪಕ್ಷದ ಕುರಿತು , ಕಾಂಗ್ರೆಸ್‌ ಮತದಾರರ ಬಗ್ಗೆ ಅವಹೇಳನಕಾರಿ ಸ್ಟೇಟಸ್‌ ಹಾಕಿದ್ದಾರೆಂಬ ಆರೋಪದಲ್ಲಿ ಇದನ್ನು ಗಮನಿಸಿದ ಕಾಂಗ್ರೆಸ್‌ ಮುಖಂಡರು ಇವರ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

Advertisement

ಪೊಲೀಸರು ಆರೋಪಿತ ವ್ಯಕ್ತಿಯನ್ನು ಠಾಣೆಗೆ ಕರೆಯಿಸಿ ವಿಚಾರಣೆ ಮಾಡಿದ್ದು, ಈ ಸಂದರ್ಭದಲ್ಲಿ ವ್ಯಕ್ತಿ ತಪ್ಪೊಪ್ಪಿಕೊಂಡಿದ್ದು, ಕ್ಷಮೆ ಯಾಚಿಸಿದ್ದು, ನಂತರ ಠಾಣೆ ಹೊರಗೆ ಇತ್ತಂಡದವರು ಮಾತುಕತೆ ನಡೆಸಿದ್ದರು.

ಈ ವೇಳೆ ಆರೋಪಿತ ವ್ಯಕ್ತಿ ಕೇಸ್‌ ಹಿಂಪಡೆಯುವಂತೆ ವಿನಂತಿ ಮಾಡಿದ್ದು, ಮೂರು ದಿನಗಳ ಕಾಲ ಅಂಗಡಿ ಮುಚ್ಚಬೇಕೆಂಬ ದೂರು ನೀಡಿದ ತಂಡ ಷರತ್ತು ವಿಧಿಸಿತ್ತು. ಇದಕ್ಕೆ ಸಮ್ಮತಿ ಸೂಚಿಸಿದ ವ್ಯಕ್ತಿ, ನಂತರ ಪ್ರಕರಣ ಹಿಂತೆಗೆಯಲಾಗಿತ್ತು.

ಹಾಗಾಗಿ ಜೂ.6 ರಂದು ವ್ಯಕ್ತಿ ತನ್ನ ಅಂಗಡಿ ತೆರೆದಿರಲಿಲ್ಲ. ಈ ಬಗ್ಗೆ ಮಾಹಿತಿ ಪಡೆದ ಬಿಜೆಪಿ ಮುಖಂಡರು, ಅಂಗಡಿ ಮಾಲಕರನ್ನು ಸಂಪರ್ಕ ಮಾಡಿ ಅಂಗಡಿ ತೆರೆಯುವಂತೆ ಸೂಚಿಸಿದ್ದರು. ಅದರಂತೆ ವ್ಯಕ್ತಿ ಅಂಗಡಿ ತೆರೆದಿದ್ದು, ಅವಹೇಳನಕಾರಿ ಸ್ಟೇಟಸ್‌ ಹಾಕಿದ್ದಕ್ಕೆ ತಪ್ಪೊಪ್ಪಿಕೊಂಡಿದ್ದು, ಅಂಗಡಿ ಬಂದ್‌ ಮಾಡುತ್ತೇನೆ ಎಂದು ಮುಚ್ಚಳಿಕೆಯಲ್ಲಿ ಬರೆದುಕೊಟ್ಟಿಲ್ಲ . ಕಾಂಗ್ರೆಸ್‌ನವರು ಹೇಳುತ್ತಾರೆಂದು ಅಂಗಡಿ ಮುಚ್ಚಲು ಸಾಧ್ಯವಿಲ್ಲ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.

Nithish Kumar: ಸದ್ಯ NDAಯಲ್ಲಿ ಇದ್ದೇವೆ, ಕಾಲಾಂತರದಲ್ಲಿ ಬದಲಾವಣೆ ಆಗಬಹದು, ಅಧಿಕಾರ ಶಾಶ್ವತ ಅಲ್ಲ - ಬಿಜೆಪಿಗೆ ಶಾಕ್ ಕೊಟ್ಟ ನಿತೀಶ್ ಕುಮಾರ್ !!

Advertisement
Advertisement
Advertisement